Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:29 - ಪರಿಶುದ್ದ ಬೈಬಲ್‌

29 “ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:29
19 ತಿಳಿವುಗಳ ಹೋಲಿಕೆ  

“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.


“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


“ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿದವುಗಳಾಗಿವೆ.


ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.


ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.


ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.


ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.


“ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.


“ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು