Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:6 - ಪರಿಶುದ್ದ ಬೈಬಲ್‌

6 “ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟುಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲಿ ಬೆಳೆಯುತ್ತಿರುವ ಧಾನ್ಯಗಳನ್ನಾಗಲಿ ಸುಟ್ಟುಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟುಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಬ್ಬನು ಹೊತ್ತಿಸಿದ ಬೆಂಕಿ ಅಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಹತ್ತಿದ್ದರಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ ಬೆಳೆಯಾಗಲಿ ಹೊಲವಾಗಲಿ ಸುಟ್ಟುಹೋದರೆ, ಬೆಂಕಿಹೊತ್ತಿಸಿದವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಬೆಂಕಿಹತ್ತಿ ಅದು ಮುಳ್ಳಿನ ಕೊಂಪೆಗೆ ತಗುಲಿ, ಸಿವುಡುಗಳ ಬಣವೆಗಳನ್ನಾಗಲಿ, ನಿಂತ ಬೆಳೆಯನ್ನಾಗಲಿ, ಹೊಲವನ್ನಾಗಲಿ ಸುಟ್ಟುಬಿಟ್ಟರೆ, ಆ ಬೆಂಕಿಯನ್ನು ಹಚ್ಚಿದವನು ಖಂಡಿತವಾಗಿ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:6
8 ತಿಳಿವುಗಳ ಹೋಲಿಕೆ  

“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.


ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡು ಕೊಡಬೇಕು.


ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.


“ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.


“ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಆ ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು