Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:8 - ಪರಿಶುದ್ದ ಬೈಬಲ್‌

8 ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:8
9 ತಿಳಿವುಗಳ ಹೋಲಿಕೆ  

“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.


ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.


ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ


“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.


“ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು