Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:15 - ಪರಿಶುದ್ದ ಬೈಬಲ್‌

15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:15
25 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.


ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.


“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.


“ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.


ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಈಜಿಪ್ಟನ್ನು ಬಿಟ್ಟು ಹೊರಟಿರಿ.


ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದರು.


ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.


“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.


“ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.


ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು