ವಿಮೋಚನಕಾಂಡ 23:2 - ಪರಿಶುದ್ದ ಬೈಬಲ್2 “ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ. ಅಧ್ಯಾಯವನ್ನು ನೋಡಿ |
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.