Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:20 - ಪರಿಶುದ್ದ ಬೈಬಲ್‌

20 “ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:20
26 ತಿಳಿವುಗಳ ಹೋಲಿಕೆ  

ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.


ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.


ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.


ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.


ಬಿಳಾಮನು ಕತ್ತೆಯ ಮೇಲೆ ಸವಾರಿ ಮಾಡುತ್ತಿದ್ದನು. ಅವನ ಜೊತೆ ಇಬ್ಬರು ಆಳುಗಳಿದ್ದರು. ಬಿಳಾಮನು ಪ್ರಯಾಣ ಮಾಡತೊಡಗಿದ್ದರಿಂದ ದೇವರು ಕೋಪಗೊಂಡನು. ಆದ್ದರಿಂದ ಯೆಹೋವನ ದೂತನು ಬಿಳಾಮನನ್ನು ತಡೆಯಲು ದಾರಿಯಲ್ಲಿ ನಿಂತುಕೊಂಡನು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು