Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:22 - ಪರಿಶುದ್ದ ಬೈಬಲ್‌

22 ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:22
12 ತಿಳಿವುಗಳ ಹೋಲಿಕೆ  

ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


“ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕೆಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು. ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಬಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು.


ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”


ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.


“ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


“ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.


ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.


ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು