Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:23 - ಪರಿಶುದ್ದ ಬೈಬಲ್‌

23 “ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ದೂತನು ನಿಮ್ಮ ಮುಂದೆ ಮುಂದೆ ನಡೆದು ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು; ಅವರನ್ನಾದರೋ ನಾನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:23
13 ತಿಳಿವುಗಳ ಹೋಲಿಕೆ  

“ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ಆರೋನನು ಅವರಿಗೆ, “ನಿಮ್ಮ ಹೆಂಡತಿಯ ಮತ್ತು ಗಂಡು ಹೆಣ್ಣುಮಕ್ಕಳಲ್ಲಿರುವ ಚಿನ್ನದ ಓಲೆಗಳನ್ನು ತಂದು ನನಗೆ ಕೊಡಿರಿ” ಎಂದು ಹೇಳಿದನು.


ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.


ಜೋರ್ಡನ್ ನದಿಯ ಪಶ್ಚಿಮದ ಎಲ್ಲ ಅರಸರು ಈ ವಿಷಯಗಳ ಬಗ್ಗೆ ಕೇಳಿದರು. ಇವರು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ರಾಜರಾಗಿದ್ದರು. ಅವರು ಬೆಟ್ಟಪ್ರದೇಶಗಳಲ್ಲಿ ಮತ್ತು ಸಮತಲ ಪ್ರದೇಶಗಳಲ್ಲಿ ವಾಸವಾಗಿದ್ದರು. ಅವರು ಭೂಮಧ್ಯಸಾಗರದ ತೀರ ಪ್ರದೇಶದಲ್ಲಿ, ಲೆಬನೋನಿನವರೆಗೆ ಸಹ ವಾಸವಾಗಿದ್ದರು.


“ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.


ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು