Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:27 - ಪರಿಶುದ್ದ ಬೈಬಲ್‌

27 “ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿಯಿಂದಲೂ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ಹೋಗುವ ಎಲ್ಲಾ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ ಕಳವಳವನ್ನು ಉಂಟು ಮಾಡಿ ನಿಮ್ಮನ್ನು ವಿರೋಧಿಸುವವರನ್ನು ಓಡಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:27
17 ತಿಳಿವುಗಳ ಹೋಲಿಕೆ  

ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.


ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ.


ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು ನೀನು ನನಗೆ ಅವಕಾಶನೀಡಿದೆ.


ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.


ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


ಮೋವಾಬ್ಯರು ನಿಜವಾಗಿಯೂ ಬಹಳ ಭಯಗೊಂಡಿದ್ದರು. ಯಾಕೆಂದರೆ ಇಸ್ರೇಲರು ಬಹುಸಂಖ್ಯಾತರಾಗಿದ್ದರು.


ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು