Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:31 - ಪರಿಶುದ್ದ ಬೈಬಲ್‌

31 “ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:31
37 ತಿಳಿವುಗಳ ಹೋಲಿಕೆ  

ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ನೀವು ಹೆಜ್ಜೆಯಿಡುವ ಭೂಮಿಯೆಲ್ಲಾ ನಿಮ್ಮದಾಗುವುದು. ದಕ್ಷಿಣದ ಮರುಭೂಮಿಯಿಂದ ಹಿಡಿದು ಉತ್ತರದ ಲೆಬನೋನಿನ ತನಕ, ಪೂರ್ವದಲ್ಲಿರುವ ಯೂಫ್ರೇಟೀಸ್ ನದಿಯಿಂದ ಪಶ್ಟಿಮದ ಭೂಮಧ್ಯಸಮುದ್ರ ತೀರದ ತನಕ ವಿಸ್ತಾರವಾಗಿದೆ.


ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಅರಣ್ಯ ಮತ್ತು ಲೆಬನೋನ್ ಪರ್ವತ ಇವುಗಳನ್ನು ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯವರೆಗಿರುವ ಹಿತ್ತಿಯರ ಪ್ರದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಪ್ರದೇಶವು ಪಶ್ಚಿಮದಲ್ಲಿನ ಮೆಡಿಟರೇನಿಯನ್ ಸಮುದ್ರದವರೆಗೆ ವಿಸ್ತರಿಸಿಕೊಳ್ಳುವುದು.


ಆ ದೇಶಗಳ ಜನರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದನು. ಈಗ ನಾವಿರುವ ಸ್ಥಳದಲ್ಲಿ ಮುಂಚೆ ವಾಸಮಾಡಿಕೊಂಡಿದ್ದ ಅಮೋರಿಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ. ಅದಕ್ಕಾಗಿ ನಾವು ಯೆಹೋವನ ಸೇವೆಯನ್ನು ಮುಂದುವರಿಸುತ್ತೇವೆ; ಏಕೆಂದರೆ ಆತನು ನಮ್ಮ ದೇವರು” ಎಂದು ಉತ್ತರಕೊಟ್ಟರು.


ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.


ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.


ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು.


ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.


ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.


ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.


“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.


ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


ಆಗ ಯೆಹೋವನು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ‘ಆಯಿ’ ಕಡೆಗೆ ಚಾಚು, ಆ ಪಟ್ಟಣವನ್ನು ನಾನು ನಿಮಗೆ ಕೊಟ್ಟಿದ್ದೇನೆ” ಎಂದನು. ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು.


ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.


ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.


ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.


ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


“ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.


“‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!


ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಈ ಸ್ತ್ರೀಯರನ್ನು ಪ್ರೀತಿಸತೊಡಗಿದನು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು.


ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ.


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.


“ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ


ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು