Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:10 - ಪರಿಶುದ್ದ ಬೈಬಲ್‌

10 ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:10
28 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.


ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಬಳಿಕ ನನ್ನ ಕೈಯನ್ನು ತೆಗೆಯುವೆನು. ಆಗ ನೀನು ನನ್ನ ಹಿಂಭಾಗವನ್ನು ನೋಡುವೆ; ಆದರೆ ನನ್ನ ಮುಖವು ನಿನಗೆ ಕಾಣಿಸದು” ಎಂದು ಉತ್ತರಕೊಟ್ಟನು.


ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೆ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಸಿರುತ್ತಾನೆ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾದ ಮಟ್ಟವನ್ನು ತಲುಪುತ್ತದೆ.


ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?


ಈ ಶಿಷ್ಯರ ಕಣ್ಣೆದುರಿನಲ್ಲಿಯೇ ಆತನು ರೂಪಾಂತರ ಹೊಂದಿದನು. ಆತನ ಮುಖವು ಸೂರ್ಯನಂತೆ ಪ್ರಕಾಶಮಾನವಾಯಿತು. ಆತನ ಉಡುಪುಗಳು ಬೆಳಕಿನಂತೆ ಬೆಳ್ಳಗಾದವು.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.


ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು?


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.


ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.


ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.


ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.


ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.


ಇಸ್ರೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ಕೊಟ್ಟಿರುವ ನಿನ್ನ ವಾಗ್ದಾನವು ನೆರವೇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು