Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:11 - ಪರಿಶುದ್ದ ಬೈಬಲ್‌

11 ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:11
24 ತಿಳಿವುಗಳ ಹೋಲಿಕೆ  

ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಸಮರ್ಪಿಸಿದನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.


ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.


ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.


ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.


ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.


ಯೆಹೋಯಾದನು ಸೇನಾಧಿಪತಿಗಳಿಗೂ ಅಧಿಪತಿಗಳಿಗೂ ಎಲ್ಲಾ ಜನರಿಗೂ ತನ್ನನ್ನು ಹಿಂಬಾಲಿಸುವಂತೆ ಹೇಳಿ, ಅರಸನನ್ನು ದೇವಾಲಯದೊಳಗಿಂದ ಹೊರತಂದನು. ಅವರೆಲ್ಲಾ ಮೇಲಿನ ಬಾಗಿಲಿನ ಮೂಲಕ ರಾಜನಿವಾಸಕ್ಕೆ ಹೋದರು. ಅಲ್ಲಿ ರಾಜನನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದರು.


ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


“ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ.


ಪ್ರಧಾನರು ಈ ಬಾವಿಯನ್ನು ತೋಡಿದರು. ಪ್ರಮುಖ ನಾಯಕರು ಈ ಬಾವಿಯನ್ನು ತೋಡಿದರು. ಅವರು ತಮ್ಮ ದೊಣ್ಣೆಗಳಿಂದ ಮತ್ತು ಕೋಲುಗಳಿಂದ ಈ ಬಾವಿಯನ್ನು ಅಗೆದರು.” ಆಮೇಲೆ ಜನರು “ಮತ್ತಾನ” ಎಂಬ ಮರುಭೂಮಿಯಿಂದ ಹೊರಟರು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.


ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.


ನೀನು ನನ್ನ ಸುತ್ತಲೂ ಆವರಿಸಿರುವೆ; ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು