Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:2 - ಪರಿಶುದ್ದ ಬೈಬಲ್‌

2 ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೋಶೆ ಒಬ್ಬನೇ ಹೊರತು ಅವನ ಜೊತೆಯವರಲ್ಲಿ ಯಾರೂ ನನ್ನ ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಅವನ ಜೊತೆಯವರಲ್ಲಿ ಸಮೀಪಕ್ಕೆ ಯಾರೂ ಬರಬಾರದು; ವಿುಕ್ಕ ಜನರು ಬೆಟ್ಟವನ್ನು ಹತ್ತಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋಶೆ ಒಬ್ಬನೇ ಯೆಹೋವ ದೇವರ ಸಮೀಪಕ್ಕೆ ಬರಲಿ. ಬೇರೆ ಯಾರೂ ಸಮೀಪಕ್ಕೆ ಬರಬಾರದು. ಜನರೂ ಅವನ ಸಂಗಡ ಮೇಲೇರಿ ಬರಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:2
12 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.


ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು.


ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು