Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:30 - ಪರಿಶುದ್ದ ಬೈಬಲ್‌

30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:30
20 ತಿಳಿವುಗಳ ಹೋಲಿಕೆ  

ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಅವರು ಮೇಜನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ನೈವೇದ್ಯದ ರೊಟ್ಟಿಯನ್ನೂ ಅವನಿಗೆ ತೋರಿಸಿದರು.


“ಆದರೆ ನೀವು ನನ್ನ ನಾಮವನ್ನು ಘನಪಡಿಸುವದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ.


“ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ಮಾತ್ರವಲ್ಲದೆ ಅವರು ಗೋಧಿಹಿಟ್ಟನ್ನು ಅಳೆದು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ದೇವಾಲಯದೊಳಗಿರುವ ಮೇಜಿನ ಮೇಲೆ ಇಡುತ್ತಿದ್ದರು.


ಕೋರಹನ ಕುಲದ ಕೆಲವರಿಗೆ, ಪ್ರತಿ ಸಬ್ಬತ್‌ದಿವಸ ದೇವರ ಸನ್ನಿಧಾನದಲ್ಲಿ ಇಡುವ ನೈವೇದ್ಯದ ರೊಟ್ಟಿಯನ್ನು ತಯಾರಿಸುವ ಕೆಲಸವಿತ್ತು.


ಅಲ್ಲಿ ಪವಿತ್ರ ರೊಟ್ಟಿಯ ಹೊರತು ಬೇರೆ ರೊಟ್ಟಿಯು ಇರಲಿಲ್ಲ. ಆದ್ದರಿಂದ ಯಾಜಕನು ಆ ರೊಟ್ಟಿಯನ್ನು ದಾವೀದನಿಗೆ ಕೊಟ್ಟನು. ಯಾಜಕರು ಯೆಹೋವನ ಸನ್ನಿಧಿಯಲ್ಲಿ ಪವಿತ್ರ ಮೇಜಿನ ಮೇಲಿಟ್ಟಿದ್ದ ರೊಟ್ಟಿಯೇ ಅದಾಗಿತ್ತು. ಈ ರೊಟ್ಟಿಯನ್ನು ಪ್ರತಿದಿನವೂ ಹೊರ ತೆಗೆಯುತ್ತಿದ್ದರು ಮತ್ತು ಹೊಸ ರೊಟ್ಟಿಯನ್ನು ಆ ಸ್ಥಳದಲ್ಲಿ ಇಡುತ್ತಿದ್ದರು.


“ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಚಮಚಗಳನ್ನೂ ಬಟ್ಟಲುಗಳನ್ನೂ ಹೂಜೆಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು.


ಮೇಜು ಮತ್ತು ಅದರ ಕೋಲುಗಳು, ಮೇಜಿನ ಮೇಲಿರುವ ಎಲ್ಲಾ ಉಪಕರಣಗಳು, ಮೇಜಿನ ಮೇಲಿರುವ ನೈವೇದ್ಯರೊಟ್ಟಿ,


ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.


ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.


ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.


ಯಾಜಕನು ದಾವೀದನಿಗೆ, “ನನ್ನ ಬಳಿ ಸಾಧಾರಣವಾದ ರೊಟ್ಟಿಗಳಿಲ್ಲ. ಆದರೆ ಕೆಲವು ಪವಿತ್ರ ರೊಟ್ಟಿಗಳಿವೆ. ನಿನ್ನ ಸೈನಿಕರು ಯಾವ ಹೆಂಗಸಿನೊಡನೆಯೂ ಲೈಂಗಿಕ ಸಂಬಂಧ ಮಾಡಿಲ್ಲದಿದ್ದರೆ ಅವರು ಅವುಗಳನ್ನು ತಿನ್ನಬಹುದು” ಎಂದನು.


ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.


ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.


ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಬದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು.


ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು