Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:37 - ಪರಿಶುದ್ದ ಬೈಬಲ್‌

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:37
28 ತಿಳಿವುಗಳ ಹೋಲಿಕೆ  

“ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.


ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.


ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.


ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು. ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”


“ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿದ ಪಟ್ಟಣ ಮರೆಯಾಗಿರಲಾರದು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ದಾರಿಗೆ ಬೆಳಕೂ ಆಗಿದೆ.


ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.


ಅವನು ಈ ದೀಪಸ್ತಂಭಕ್ಕೆ ಏಳು ಹಣತೆಗಳನ್ನು ಮಾಡಿದನು; ಬಳಿಕ ಅಪ್ಪಟ ಬಂಗಾರದಿಂದ ಬತ್ತಿಗಳನ್ನು ಸರಿಪಡಿಸುವ ಕತ್ತರಿಗಳನ್ನೂ ಹರಿವಾಣಗಳನ್ನೂ ಮಾಡಿದನು.


ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.


ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.


ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.


“ಆಮೇಲೆ ದೀಪಸ್ತಂಭಕ್ಕೂ ಅದರ ದೀಪಗಳಿಗೂ ದೀಪಗಳ ಉಪಕರಣಗಳಿಗೂ ಬೂದಿ ತೆಗೆಯುವ ಅಗ್ಗಿಷ್ಠಿಕೆಗೂ ಮತ್ತು ಅದಕ್ಕಾಗಿ ಉಪಯೋಗಿಸುವ ಎಲ್ಲಾ ಎಣ್ಣೆಯ ಪಾತ್ರೆಗಳಿಗೂ ನೀಲಿಬಟ್ಟೆಯನ್ನು ಹೊದಿಸಬೇಕು.


ಅಪ್ಪಟ ಬಂಗಾರದಿಂದ ದೀಪಸ್ತಂಭಗಳನ್ನೂ ದೀಪಗಳನ್ನೂ ಮಾಡಿಸಿದನು. ಈ ದೀಪಸ್ತಂಭಗಳು ಮಹಾಪವಿತ್ರ ಸ್ಥಳದ ಎದುರಿನಲ್ಲಿ ನೇಮಕವಾದ ರೀತಿಯಲ್ಲಿ ಉರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು