Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:21 - ಪರಿಶುದ್ದ ಬೈಬಲ್‌

21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:21
44 ತಿಳಿವುಗಳ ಹೋಲಿಕೆ  

ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.


ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ಇಸ್ರೇಲಿಗೆ ದಾವೀದನು ಇದನ್ನು ಆಜ್ಞೆಯನ್ನಾಗಿ ಮತ್ತು ನಿಯಮವನ್ನಾಗಿ ಮಾಡಿದನು. ಈ ನಿಯಮವು ಇವತ್ತಿಗೂ ಮುಂದುವರಿಯುತ್ತಿದೆ.


ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


“ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಲೇವಿಯರನ್ನು ದೇವದರ್ಶನಗುಡಾರದ ಮುಂಭಾಗಕ್ಕೆ ಕರೆದುಕೊಂಡು ಬಂದು ಇಸ್ರೇಲರನ್ನು ಒಟ್ಟಾಗಿ ಸೇರಿಸು.


ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”


ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.


ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಪವಿತ್ರಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.


ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.


“ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.


“ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.


ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.


“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು.


(ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)


ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.


ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.


“ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.


“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.


“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.


ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”


ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.


“ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು