Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:21 - ಪರಿಶುದ್ದ ಬೈಬಲ್‌

21 ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:21
11 ತಿಳಿವುಗಳ ಹೋಲಿಕೆ  

ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.


ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಮತ್ತು ಬೆರುಲ್ಲ ವಜ್ರಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


“ದೈವನಿರ್ಣಯ ಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಈ ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು.


ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.


ನನ್ನ ಮಾತುಗಳನ್ನು ಸೀಸದ ಹಲಗೆಯ ಮೇಲೆಯೂ ಬಂಡೆಯ ಮೇಲೆಯೂ ಕೆತ್ತಿದರೆ ಎಷ್ಟೋ ಒಳ್ಳೆಯದು. ಆಗ ಅವು ಶಾಶ್ವತವಾಗಿರುತ್ತವೆ.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು