Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:30 - ಪರಿಶುದ್ದ ಬೈಬಲ್‌

30 ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್‌ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:30
22 ತಿಳಿವುಗಳ ಹೋಲಿಕೆ  

ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.


ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.


ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿದನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ನಾನು ಇದನ್ನು ಹೇಳುತ್ತಿರುವುದು ನಿಮ್ಮನ್ನು ನಿಂದಿಸುವುದಕ್ಕಾಗಿಯಲ್ಲ. ನಿಮ್ಮೊಂದಿಗೆ ಬದುಕುವಷ್ಟರಮಟ್ಟಿಗೆ ಮತ್ತು ಸಾಯುವಷ್ಟರಮಟ್ಟಿಗೆ ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತೇವೆಂದು ನಾನು ಮೊದಲೇ ನಿಮಗೆ ತಿಳಿಸಿದ್ದೇನೆ.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


“ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು