Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:38 - ಪರಿಶುದ್ದ ಬೈಬಲ್‌

38 ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಸ್ರಯೇಲರನ್ನು ಪರಿಶುದ್ಧಗೊಳಿಸುವ ಪವಿತ್ರವಸ್ತುಗಳಲ್ಲಿ ಹಾಗು ಅವರು ಕಾಣಿಕೆಯಾಗಿ ಸಮರ್ಪಿಸುವ ಸಮಸ್ತವಸ್ತುಗಳಲ್ಲಿ ದೋಷವೇನಾದರು ಇದ್ದರೆ ಆರೋನನು ಆ ಪಟ್ಟಿಯನ್ನು ತಲೆಯ ಮೇಲೆ ಧರಿಸಿ ಆ ದೋಷವನ್ನು ತಾನೇ ವಹಿಸಿಕೊಳ್ಳುತ್ತಾನೆ. ಆದ್ದರಿಂದ ಅವರು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಅಂಗೀಕೃತರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇಸ್ರಾಯೇಲ್ಯರು ಕಾಣಿಕೆಯಗಿ ಸಮರ್ಪಿಸುವ ದೇವರ ಎಲ್ಲಾ ವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷವನ್ನು ವಹಿಸಿಕೊಂಡದರಿಂದ ಅವರು ಯೆಹೋವನ ಸನ್ನಿಧಿಯಲ್ಲಿ ಅಂಗೀಕರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇಸ್ರಾಯೇಲರು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ದೋಷವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಯೆಹೋವ ದೇವರ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:38
21 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.


ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.


“ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.


“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”


ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”


ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು