Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:4 - ಪರಿಶುದ್ದ ಬೈಬಲ್‌

4 ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:4
20 ತಿಳಿವುಗಳ ಹೋಲಿಕೆ  

ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.


ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು


ಆದರೆ ನಾವು ಹಗಲಿಗೆ ಸೇರಿದವರಾದ್ದರಿಂದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನಂಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.


ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.


(ಎಬ್ಯಾತಾರನು ದಾವೀದನ ಹತ್ತಿರಕ್ಕೆ ಓಡಿಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)


ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.


ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.


ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು.


ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.


ಅವನ ತಲೆಗೆ ಮುಂಡಾಸನ್ನು ಇಡು ಮತ್ತು ಮುಂಡಾಸಕ್ಕೆ ವಿಶೇಷವಾದ ಕಿರೀಟವನ್ನು ಕಟ್ಟಿಸು.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು