Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:9 - ಪರಿಶುದ್ದ ಬೈಬಲ್‌

9 “ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊ. ಈ ರತ್ನಗಳ ಮೇಲೆ ಇಸ್ರೇಲನ ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ನೀನು ಎರಡು ಗೋಮೇಧಕರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೊಂಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:9
16 ತಿಳಿವುಗಳ ಹೋಲಿಕೆ  

ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.


ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ.


ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.


ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು.


“ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳು ಇದ್ದವು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಇಟ್ಟರು.


ಕೆಲಸಗಾರರು ಗೋಮೇಧಕ ರತ್ನಗಳನ್ನು ಏಫೋದಿನೊಳಗೆ ಚಿನ್ನದ ಕುಂದಣದಲ್ಲಿ ಇಟ್ಟರು. ಈ ರತ್ನಗಳಲ್ಲಿ ಇಸ್ರೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದರು.


“ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಮತ್ತು ಬೆರುಲ್ಲ ವಜ್ರಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.


ಈ ದೇಶದಲ್ಲಿ ಒಳ್ಳೆಯ ಬಂಗಾರ ದೊರೆಯುತ್ತಿತ್ತು. ಅಲ್ಲದೆ ಗುಗ್ಗುಲ ಮತ್ತು ಗೋಮೇಧಿಕ ರತ್ನ ಸಹ ದೊರಕುತ್ತಿದ್ದವು.


“ಇವರು ಏಫೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಫೋದನ್ನು ತಯಾರಿಸಿದಂತೆಯೇ ಈ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.


ಒಂದು ರತ್ನದ ಮೇಲೆ ಆರು ಹೆಸರುಗಳನ್ನೂ ಇನ್ನೊಂದು ರತ್ನದ ಮೇಲೆ ಆರು ಹೆಸರುಗಳನ್ನೂ ಬರೆಸು. ಹಿರಿಮಗನಿಂದ ಹಿಡಿದು ಕಿರಿ ಮಗನವರೆಗೆ ಕ್ರಮಾನುಸಾರವಾಗಿ ಹೆಸರುಗಳನ್ನು ಬರೆಸು.


ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.


ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು.


ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು