Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:12 - ಪರಿಶುದ್ದ ಬೈಬಲ್‌

12 ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:12
18 ತಿಳಿವುಗಳ ಹೋಲಿಕೆ  

ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.


ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ಈ ಧೂಪವೇದಿಕೆಯು ಚೌಕವಾಗಿ ಒಂದು ಮೊಳ ಉದ್ದ, ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಈ ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು.


ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಅಲ್ಲದೆ ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದಲ್ಲಿ ತನ್ನ ಬೆರಳಿನಿಂದ ಚಿಮಿಕಿಸಬೇಕು. ಕೃಪಾಸನದ ಮುಂಭಾಗದಲ್ಲಿ ಅವನು ತನ್ನ ಬೆರಳಿನಿಂದ ರಕ್ತವನ್ನು ಏಳು ಬಾರಿ ಚಿಮಿಕಿಸುವನು.


ಯಾಜಕನು ದೋಷಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.


ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)


ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.


ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.


ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು