Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:22 - ಪರಿಶುದ್ದ ಬೈಬಲ್‌

22 “ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಲ್ಪಟ್ಟ ಆ ಟಗರಿನ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:22
14 ತಿಳಿವುಗಳ ಹೋಲಿಕೆ  

ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.


ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.


“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.


ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಆರೋನನ ಪುತ್ರರು ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಆರೋನನ ಬಳಿಗೆ ತಂದರು. ಇವರು ಬಾಲದ ಕೊಬ್ಬನ್ನೂ ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೂ ಮೂತ್ರಪಿಂಡಗಳನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತಂದರು.


“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನೆಲ್ಲಾ ಅರ್ಪಿಸಬೇಕು. ಅವನು ಬಾಲದ ಕೊಬ್ಬನ್ನು ಮತ್ತು ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೆಲ್ಲಾ ಸಮರ್ಪಿಸಬೇಕು.


ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.


ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.


ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.


ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ.


ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.


ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಈ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ಈ ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ಆ ದಿನ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು