Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:24 - ಪರಿಶುದ್ದ ಬೈಬಲ್‌

24 ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:24
9 ತಿಳಿವುಗಳ ಹೋಲಿಕೆ  

ಕಾಣಿಕೆಯ ಆ ಭಾಗವು ಅಗ್ನಿಯಲ್ಲಿ ಹೋಮಮಾಡಬೇಕು. ಅವನು ಕಾಣಿಕೆಯನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಗೆ ಹೋಗಬೇಕು. ಅವನು ಆ ಪಶುವಿನ ಕೊಬ್ಬನ್ನೂ ಎದೆಯ ಭಾಗವನ್ನೂ ಯಾಜಕನ ಬಳಿಗೆ ತರಬೇಕು. ಯೆಹೋವನ ಸನ್ನಿಧಿಯಲ್ಲಿ ಎದೆಯ ಭಾಗವು ನಿವಾಳಿಸಲ್ಪಡಬೇಕು. ಇದು ನೈವೇದ್ಯ ಸಮರ್ಪಣೆಯಾಗಿರುವುದು.


ಬಳಿಕ ಮೋಶೆ ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟು, ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.


ಮೋಶೆ ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲ ತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.


ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.


“ನೀನು ಲೇವಿಯರನ್ನು ಶುದ್ಧೀಕರಿಸಿ ಅವರನ್ನು ವಿಶೇಷ ಕೊಡುಗೆಯಾಗಿ ನನಗೆ ಕೊಟ್ಟ ಮೇಲೆ, ಅವರು ಬಂದು ದೇವದರ್ಶನಗುಡಾರದ ಕೆಲಸವನ್ನು ಮಾಡಬಹುದು.


ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು