Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:37 - ಪರಿಶುದ್ದ ಬೈಬಲ್‌

37 ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:37
12 ತಿಳಿವುಗಳ ಹೋಲಿಕೆ  

ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.


ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.


“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


ದೋಷಪರಿಹಾರಕಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಬೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು