ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.