Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:42 - ಪರಿಶುದ್ದ ಬೈಬಲ್‌

42 “ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರೂ ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮಗೆ ದರ್ಶನವನ್ನು ಕೊಟ್ಟು ನಿನ್ನ ಸಂಗಡ ಮಾತಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:42
10 ತಿಳಿವುಗಳ ಹೋಲಿಕೆ  

ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.


ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.


ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.


ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ” ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು.


ನೀನು ಆ ಕುಲಗಳನ್ನು ದೇವದರ್ಶನಗುಡಾರದಲ್ಲಿ ಅಂದರೆ ನಾನು ನಿನ್ನನ್ನು ಸಂಧಿಸುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ಇಡಬೇಕು.


ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.


ಹೀಗೆ ಅವರು ಶಾಶ್ವತವಾಗಿ ಕುರಿ, ಧಾನ್ಯ ಮತ್ತು ಎಣ್ಣೆಯನ್ನು ಪ್ರತೀ ಮುಂಜಾನೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು.”


ಆಲಯದೊಳಗಿಂದ ಯಾರೋ ನನ್ನೊಡನೆ ಮಾತನಾಡಿದಂತೆ ಕೇಳಿಸಿತು. ಅವನು ನನ್ನ ಬಳಿಯಲ್ಲಿ ಇನ್ನೂ ನಿಂತುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು