Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:7 - ಪರಿಶುದ್ದ ಬೈಬಲ್‌

7 ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನಮಾಡಿ ಅವನನ್ನು ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:7
15 ತಿಳಿವುಗಳ ಹೋಲಿಕೆ  

ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!


ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.


ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು