9 ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.
9 ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.
9 ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.
ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.
“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”
ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.
ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡುಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.
“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.