Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:11 - ಪರಿಶುದ್ದ ಬೈಬಲ್‌

11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:11
13 ತಿಳಿವುಗಳ ಹೋಲಿಕೆ  

ಆದರೆ ದಾವೀದನು, “ನಾನು ಪ್ರಮುಖ ಕುಲದವನೂ ಅಲ್ಲ; ಪ್ರಮುಖನಾದ ವ್ಯಕ್ತಿಯೂ ಅಲ್ಲ! ರಾಜನ ಮಗಳನ್ನು ಮದುವೆಯಾಗಲು ನಾನು ಯೋಗ್ಯನಲ್ಲ” ಎಂದು ಹೇಳಿದನು.


ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.


ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.


ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?


ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು