Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:13 - ಪರಿಶುದ್ದ ಬೈಬಲ್‌

13 ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:13
16 ತಿಳಿವುಗಳ ಹೋಲಿಕೆ  

ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.


ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಆದ್ದರಿಂದ ಮಾನೋಹನು ಯೆಹೋವನ ದೂತನಿಗೆ, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ. ನಿನ್ನ ಹೆಸರೇನು?” ಎಂದು ಕೇಳಿದನು.


ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.


ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ. ಆತನ ಜನರು ಅರಣ್ಯದಲ್ಲಿ ಆತನನ್ನು ಆರಾಧಿಸುವುದಕ್ಕೆ ನೀನು ಅವರಿಗೆ ಅಪ್ಪಣೆಕೊಡಬೇಕೆಂದು ಆತನು ನಿನಗೆ ಆಜ್ಞಾಪಿಸುತ್ತಾನೆ. ಇದುವರೆಗೆ ನೀನು ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು