Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:9 - ಪರಿಶುದ್ದ ಬೈಬಲ್‌

9 ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:9
22 ತಿಳಿವುಗಳ ಹೋಲಿಕೆ  

ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.


ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.


ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು.


“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.


ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ


“ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.


ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.


ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.


“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.


ನಮ್ಮ ಪೂರ್ವಿಕರು ಈಜಿಪ್ಟಿನಲ್ಲಿ ಸಂಕಟ ಅನುಭವಿಸುವುದನ್ನು ನೀನು ನೋಡಿದೆ. ಕೆಂಪು ಸಮುದ್ರದ ಬಳಿ ಸಹಾಯಕ್ಕಾಗಿ ಅವರು ಮೊರೆಯಿಟ್ಟಾಗ ನೀನು ಅವರಿಗೆ ಕಿವಿಗೊಟ್ಟೆ.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು