Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೆ ಜಾಲೀಮರದ ಧೂಪವೇದಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:1
21 ತಿಳಿವುಗಳ ಹೋಲಿಕೆ  

ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಈ ಕೊಠಡಿಯು ಮೂವತ್ತು ಅಡಿ ಉದ್ದ ಮೂವತ್ತು ಅಡಿ ಅಗಲ ಮತ್ತು ಮೂವತ್ತು ಅಡಿ ಎತ್ತರವಾಗಿತ್ತು.


ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)


“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಈ ಧೂಪವೇದಿಕೆಯು ಚೌಕವಾಗಿ ಒಂದು ಮೊಳ ಉದ್ದ, ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಈ ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು.


ಧೂಪವೇದಿ ಮತ್ತು ಅದರ ಕೋಲುಗಳು, ಅಭಿಷೇಕತೈಲ, ಪರಿಮಳಧೂಪ, ಪವಿತ್ರ ಗುಡಾರದ ಬಾಗಿಲಿನ ಪರದೆ,


ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾ ಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.


ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.


ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.


ಧೂಪವೇದಿಗೆ ಎಷ್ಟು ಅಪ್ಪಟ ಬಂಗಾರ ಬೇಕೆಂಬುದನ್ನು ದಾವೀದನು ತಿಳಿಸಿದನು. ಇದಲ್ಲದೆ ದೇವರ ಕೃಪಾಸನವನ್ನು ಮತ್ತು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ರೆಕ್ಕೆಗಳನ್ನು ಚಾಚಿಕೊಂಡಿರುವ ಕೆರೂಬಿದೂತರನ್ನು ತಯಾರಿಸಲು ನಕ್ಷೆಗಳನ್ನು ದಾವೀದನು ಸೊಲೊಮೋನನಿಗೆ ಕೊಟ್ಟನು. ಕೆರೂಬಿದೂತರನ್ನು ಚಿನ್ನದಿಂದ ಮಾಡಲಾಗಿತ್ತು.


ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಬದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು.


ಮೇಜು ಮತ್ತು ಅದರ ಮೇಲಿನ ವಸ್ತುಗಳು, ಬಂಗಾರದ ದೀಪಸ್ತಂಭ ಮತ್ತು ಅದರ ಉಪಕರಣಗಳು,


ಅವರು ಚಿನ್ನದ ವೇದಿಕೆಯನ್ನೂ ಅಭಿಷೇಕತೈಲವನ್ನೂ ಪರಿಮಳಧೂಪವನ್ನೂ ಗುಡಾರದ ಪ್ರವೇಶದಲ್ಲಿರುವ ಪರದೆಯನ್ನೂ ಮೋಶೆಗೆ ತೋರಿಸಿದರು.


“ಅವರು ಚಿನ್ನದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಶ್ರೇಷ್ಠ ತೊಗಲಿಂದ ಅದನ್ನು ಮುಚ್ಚಬೇಕು. ಬಳಿಕ ಅವರು ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಿಗೆ ಸೇರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು