Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:18 - ಪರಿಶುದ್ದ ಬೈಬಲ್‌

18 “ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:18
15 ತಿಳಿವುಗಳ ಹೋಲಿಕೆ  

ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇರಿಸು. ಗಂಗಾಳದಲ್ಲಿ ನೀರನ್ನು ಹಾಕಿಸು.


ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.


ಅವನು ಎರಕಹೊಯ್ದ ದೊಡ್ಡ ಗಾತ್ರದ ನೀರಿನ ಪಾತ್ರೆಯನ್ನು ಮಾಡಿಸಿದನು. ಇದು ದುಂಡಾಕಾರವಾಗಿದ್ದು ಅದರ ಬಾಯಿಯ ಅಂಚಿನಿಂದ ಅಂಚಿಗೆ ಹತ್ತು ಮೊಳ ಅಗಲವಿತ್ತು; ಅದರ ಸುತ್ತಳತೆ ಮೂವತ್ತು ಮೊಳ; ಎತ್ತರ ಐದು ಮೊಳ.


ಹೀರಾಮನು ಹತ್ತು ಗಂಗಾಳಗಳನ್ನು ಮಾಡಿದನು. ಹತ್ತು ಬಂಡಿಗಳಲ್ಲಿ ಒಂದೊಂದು ಬಂಡಿಗೆ ಒಂದೊಂದು ಗಂಗಾಳವಿತ್ತು. ಪ್ರತಿಯೊಂದು ಗಂಗಾಳದ ಅಗಲವು ಆರು ಅಡಿಗಳು. ಪ್ರತಿ ಗಂಗಾಳವು ಇನ್ನೂರ ಮೂವತ್ತು ಗ್ಯಾಲನ್ ನೀರನ್ನು ಹಿಡಿಯುತ್ತಿತ್ತು.


ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಸೊಲೊಮೋನನು ಹತ್ತು ಗಂಗಾಳಗಳನ್ನು ಮಾಡಿಸಿದನು. ಐದು ಗಂಗಾಳಗಳನ್ನು ತಾಮ್ರದ ನೀರಿನ ತೊಟ್ಟಿಯ ಬಲಗಡೆಯಲ್ಲಿಡಿಸಿದನು. ಉಳಿದ ಐದು ಗಂಗಾಳಗಳನ್ನು ಪಾತ್ರೆಯ ಎಡಗಡೆಯಲ್ಲಿಡಿಸಿದನು. ಈ ಗಂಗಾಳಗಳ ನೀರನ್ನು ಯಜ್ಞ ಮಾಡಲಿಕ್ಕಿರುವ ಪದಾರ್ಥಗಳನ್ನು ತೊಳೆಯುವದಕ್ಕಾಗಿ ಉಪಯೋಗಿಸಿದರು. ಯಾಜಕರು ಯಜ್ಞಗಳನ್ನು ಅರ್ಪಿಸುವ ಮೊದಲು ತಮ್ಮನ್ನು ಶುದ್ಧ ಮಾಡಿಕೊಳ್ಳುವದಕ್ಕಾಗಿ ದೊಡ್ಡ ತಾಮ್ರದ ಪಾತ್ರೆಯ ನೀರನ್ನು ಉಪಯೋಗಿಸುತ್ತಿದ್ದರು.


ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.


ಧೂಪವೇದಿಕೆ, ಯಜ್ಞವೇದಿಕೆ ಮತ್ತು ಅವುಗಳ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು