Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:7 - ಪರಿಶುದ್ದ ಬೈಬಲ್‌

7 “ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:7
20 ತಿಳಿವುಗಳ ಹೋಲಿಕೆ  

ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.


ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.


ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.


ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.


ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.


ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.


ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.


“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.


ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಸಮುವೇಲನು ಎಲ್ಕಾನನ ಮಗ. ಎಲ್ಕಾನನು ಯೆರೋಹಾಮನ ಮಗ. ಯೆರೋಹಾಮನು ಎಲೀಯೇಲನ ಮಗ. ಎಲೀಯೇಲನು ತೋಹನ ಮಗ.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು