Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:3 - ಪರಿಶುದ್ದ ಬೈಬಲ್‌

3 ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:3
12 ತಿಳಿವುಗಳ ಹೋಲಿಕೆ  

ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.


ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.


ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ಆದ್ದರಿಂದ ನಿನ್ನ ಜನರನ್ನು ಒಳ್ಳೆಯ ರೀತಿಯಲ್ಲಿ ಆಳಲು ಮತ್ತು ಅವರಿಗೆ ಸರಿಯಾದ ತೀರ್ಪುಗಳನ್ನು ನೀಡಲು ನನಗೆ ವಿವೇಕವನ್ನು ಕರುಣಿಸು. ಇದು ನನಗೆ ಸರಿ ಮತ್ತು ತಪ್ಪುಗಳ ನಡುವಿರುವ ಭೇದವನ್ನು ತಿಳಿಸಿಕೊಡುತ್ತದೆ. ನನಗೆ ಉತ್ತಮವಾದ ವಿವೇಕವಿಲ್ಲದಿದ್ದರೆ, ನಾನು ಈ ಮಹಾಜನಾಂಗವನ್ನು ಆಳುವುದು ಸಾಧ್ಯವಾಗುವುದಿಲ್ಲ” ಎಂದು ಉತ್ತರಿಸಿದನು.


ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.


ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು.


ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.


“ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.


ರಾಜನಾದ ಸೊಲೊಮೋನನು ತೂರಿನಲ್ಲಿದ್ದ ಹೀರಾಮ್ ಎಂಬವನಿಗೆ ಸಂದೇಶವನ್ನು ಕಳುಹಿಸಿ ಅವನನ್ನು ಜೆರುಸಲೇಮಿಗೆ ಕರೆಸಿದನು.


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು