Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:15 - ಪರಿಶುದ್ದ ಬೈಬಲ್‌

15 ಬಳಿಕ ಮೋಶೆ ಬೆಟ್ಟದಿಂದಿಳಿದು ಬಂದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು; ಈ ಕಡೆಯೂ ಆ ಕಡೆಯೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:15
14 ತಿಳಿವುಗಳ ಹೋಲಿಕೆ  

“ನಾನು ಕೂಡಲೇ ಬೆಟ್ಟದಿಂದ ಹಿಂತಿರುಗಿ ಬಂದೆನು. ಅದು ಬೆಂಕಿಯಿಂದ ಸುಡುತ್ತಲಿತ್ತು ಮತ್ತು ಒಡಂಬಡಿಕೆಯ ಕಲ್ಲಿನ ಹಲಗೆಗಳು ನನ್ನ ಬಳಿಯಲ್ಲಿ ಇದ್ದವು.


ಸಿಂಹಾಸನದ ಮೇಲೆ ಕುಳಿತಿರುವಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ನೋಡಿದೆನು. ಅದರ ಎರಡು ಕಡೆಗಳಲ್ಲಿಯೂ ಬರಹವಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.


ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.


ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.


ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.


(ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)


ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.


ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.


ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.


ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು