Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:19 - ಪರಿಶುದ್ದ ಬೈಬಲ್‌

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:19
20 ತಿಳಿವುಗಳ ಹೋಲಿಕೆ  

ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ.


ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.


ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.


ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.


“ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”


(ಮೋಶೆಯು ಬಹಳ ದೀನನಾದ ವ್ಯಕ್ತಿ. ಅವನು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ದೀನನಾಗಿದ್ದನು.)


ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಉತ್ಸವದ ಧ್ವನಿ” ಎಂದು ಉತ್ತರಿಸಿದನು.


ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು.


ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹುಕೋಪಗೊಳ್ಳುವೆ.


ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು