Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:22 - ಪರಿಶುದ್ದ ಬೈಬಲ್‌

22 ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆರೋನನು - ಸ್ವಾವಿುಯವರು ರೋಷಗೊಳ್ಳಬಾರದು; ಈ ಜನರು ದುಷ್ಟಸ್ವಭಾವಿಗಳೆಂಬದನ್ನು ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:22
17 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.


ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.


ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.


ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.


ಅವರು ಮೋಶೆಗೆ, “ನೀನು ಯಾಕೆ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆ? ನಮ್ಮನ್ನು ಅರಣ್ಯದಲ್ಲಿ ಸಾಯಿಸುವುದಕ್ಕೆ ನೀನು ನಮ್ಮನ್ನು ಕರೆದುಕೊಂಡು ಬಂದೆಯಾ? ನಾವು ಈಜಿಪ್ಟಿನಲ್ಲಿಯೇ ಸಮಾಧಾನದಿಂದ ಸಾಯಬಹುದಾಗಿತ್ತಲ್ಲವೆ? ಈಜಿಪ್ಟಿನಲ್ಲಿ ಸಾಕಷ್ಟು ಸಮಾಧಿಗಳಿದ್ದವು.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.


ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.


ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞವನ್ನರ್ಪಿಸುವುದಕ್ಕಾಗಿ ಸೈನಿಕರು ಉತ್ತಮವಾದ ದನಕುರಿಗಳನ್ನು ವಶಪಡಿಸಿಕೊಂಡು ಬಂದರು” ಎಂದು ಉತ್ತರಿಸಿದನು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು