Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:4 - ಪರಿಶುದ್ದ ಬೈಬಲ್‌

4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:4
36 ತಿಳಿವುಗಳ ಹೋಲಿಕೆ  

ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, ‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು.


ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ.


ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


“ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.


“ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿವೆ.


ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.


ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.


“ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊ. ಈ ರತ್ನಗಳ ಮೇಲೆ ಇಸ್ರೇಲನ ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರೆಸು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದ್ದರಿಂದ ಅವರೆಲ್ಲರೂ ತಮ್ಮ ಚಿನ್ನದ ಓಲೆಗಳನ್ನು ತಂದುಕೊಟ್ಟರು.


ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ಆದ್ದರಿಂದ ನಾನು ಅವರಿಗೆ, ‘ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.


ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.


ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.


“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.


ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.


ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು