Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:5 - ಪರಿಶುದ್ದ ಬೈಬಲ್‌

5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:5
18 ತಿಳಿವುಗಳ ಹೋಲಿಕೆ  

ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.


“ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.


“ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.


ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


“ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.


ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.


ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.


ಆ ಪತ್ರದಲ್ಲಿ ಹೀಗೆ ಬರೆದಿತ್ತು: “ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆ ಸೇರಿಸಿರಿ.


ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


“ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.


ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.


ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು