Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:7 - ಪರಿಶುದ್ದ ಬೈಬಲ್‌

7 ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇತ್ತ ಸರ್ವೇಶ್ವರ ಮೋಶೆಗೆ, “ನೀನು ಕೂಡಲೆ ಬೆಟ್ಟದಿಂದ ಇಳಿದುಹೋಗು, ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಯೆಹೋವನು ಮೋಶೆಗೆ - ನೀನು ಬೆಟ್ಟದಿಂದ ಇಳಿದುಹೋಗು; ಐಗುಪ್ತದೇಶದಿಂದ ನೀನು ಕರಕೊಂಡು ಬಂದ ನಿನ್ನ ಜನರು ಕೆಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:7
17 ತಿಳಿವುಗಳ ಹೋಲಿಕೆ  

ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.


ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ನೀವು ದ್ರೋಹಿಗಳೇ, ನೀವು ಆತನ ಮಕ್ಕಳಲ್ಲ. ನಿಮ್ಮ ಪಾಪಗಳು ಆತನನ್ನು ಮಲಿನ ಮಾಡುವವು. ನೀವು ಡೊಂಕಾದ ಸುಳ್ಳುಗಾರರು.


ಆದ್ದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲಿ


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು.


ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು