Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:14 - ಪರಿಶುದ್ದ ಬೈಬಲ್‌

14 ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:14
20 ತಿಳಿವುಗಳ ಹೋಲಿಕೆ  

ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಯೆಹೋವನು ದಾರಿಯನ್ನು ತೋರಿಸಿದನು. ಹಗಲಿನಲ್ಲಿ ಜನರನ್ನು ನಡಿಸಲು ಯೆಹೋವನು ಎತ್ತರವಾದ ಮೇಘಸ್ತಂಭವನ್ನು ಉಪಯೋಗಿಸಿದನು; ರಾತ್ರಿ ವೇಳೆಯಲ್ಲಿ ದಾರಿಯನ್ನು ತೋರಿಸಲು ಯೆಹೋವನು ಎತ್ತರವಾದ ಅಗ್ನಿಸ್ತಂಭವನ್ನು ಉಪಯೋಗಿಸಿದನು. ಈ ಬೆಂಕಿಯು ಅವರಿಗೆ ಬೆಳಕು ಕೊಟ್ಟಿದ್ದರಿಂದ ಅವರು ರಾತ್ರಿಯಲ್ಲಿ ಪ್ರಯಾಣ ಮಾಡಲು ಸಾಧ್ಯವಾಯಿತು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


“ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.


ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.


ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.


ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನ್ನು ಬಯಸಿ ಬರುವುದು.”


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


“ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು