Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:3 - ಪರಿಶುದ್ದ ಬೈಬಲ್‌

3 ಆದ್ದರಿಂದ ಸಮೃದ್ಧಿಕರವಾದ ಆ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:3
33 ತಿಳಿವುಗಳ ಹೋಲಿಕೆ  

ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


ಜನರು ಮಾಡಿದವುಗಳನ್ನು ದೇವರು ನೋಡಿದನು; ಅವರು ದುಷ್ಟತನ ಮಾಡುವದನ್ನು ನಿಲ್ಲಿಸಿದ್ದನ್ನು ಗಮನಿಸಿದನು. ಆತನು ಅವರನ್ನು ದಂಡಿಸಲಿಲ್ಲ.


ಯೋನನು ನಗರದ ಮಧ್ಯಕ್ಕೆ ಹೋಗಿ ಜನರಿಗೆ ಸಾರಲಿಕ್ಕೆ ಪ್ರಾರಂಭಿಸಿದನು. “ನಲವತ್ತು ದಿನಗಳು ಕಳೆದ ಬಳಿಕ ನಿನೆವೆಯು ನಾಶವಾಗುವದು” ಎಂದು ಜನರಿಗೆ ಸಾರಿದನು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?


ಸರಿ, ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು” ಎಂದು ಹೇಳಿದನು.


ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.


ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು