Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:5 - ಪರಿಶುದ್ದ ಬೈಬಲ್‌

5 ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನೀವು ನನ್ನ ಆಜ್ಞೆಗಳಿಗೆ ಬೊಗ್ಗದವರೇ. ನಾನು ಒಂದು ಕ್ಷಣಮಾತ್ರ ನಿಮ್ಮ ಮಧ್ಯದಲ್ಲಿ ಬರುವದಾದರೆ ನೀವು ನಿರ್ಮೂಲವಾಗಿ ಹೋದೀರಿ, ನೋಡಿಕೊಳ್ಳಿರಿ. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ ನಿಮಗೆ ನಾನು ಏನು ಮಾಡಬೇಕೆಂಬದನ್ನು ಆಲೋಚಿಸಿಕೊಳ್ಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:5
16 ತಿಳಿವುಗಳ ಹೋಲಿಕೆ  

“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಒಬ್ಬನು ಕ್ಷಣಮಾತ್ರದೊಳಗೆ ಮಧ್ಯರಾತ್ರಿಯಲ್ಲಿ ಸಾಯಬಹುದು. ಜನರು ಕಾಯಿಲೆಯಿಂದ ಸಾಯಬಹುದು. ದುಷ್ಟರು ಸಹ ಯಾವುದೇ ಕಾರಣವಿಲ್ಲದೆ ಸಾಯಬಹುದು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಆದ್ದರಿಂದ ನಾನು ಕೆಳಗಿಳಿದು ಅಲ್ಲಿಗೆ ಹೋಗಿ ನಾನು ಕೇಳಿದ್ದು ನಿಜವೇ ಎಂದು ಪರೀಕ್ಷಿಸುವೆನು” ಅಂದನು.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.


ಇಸ್ರೇಲರು ಹೋರೆಬ್ ಬೆಟ್ಟದಲ್ಲಿದ್ದಾಗ ಆಭರಣಗಳನ್ನು ಧರಿಸಿಕೊಳ್ಳುವುದನ್ನು ಬಿಟ್ಟುಬಿಟ್ಟರು.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು