Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:21 - ಪರಿಶುದ್ದ ಬೈಬಲ್‌

21 “ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:21
13 ತಿಳಿವುಗಳ ಹೋಲಿಕೆ  

“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.


ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.


“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.


ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.


ನಿಮ್ಮ ದನಕರುಗಳಿಗೂ ಕತ್ತೆಗಳಿಗೂ ಬೇಕಾದಷ್ಟು ಮೇವಿದೆ. ಆಹಾರವು ಯಥೇಚ್ಛವಾಗಿರುವದು. ನಿಮ್ಮ ದನಕರುಗಳು ಮೊರದಿಂದಲೂ ಕವೇಕೋಲಿನಿಂದಲೂ ತೂರಿದ ಉಪ್ಪುಪ್ಪಾದ ಮೇವನ್ನು ತಿನ್ನುವವು.


ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು