Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:23 - ಪರಿಶುದ್ದ ಬೈಬಲ್‌

23 “ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲ್ಯರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ನೆರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವರುಷಕ್ಕೆ ಮೂರು ಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಸಾರ್ವಭೌಮ ಯೆಹೋವ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:23
9 ತಿಳಿವುಗಳ ಹೋಲಿಕೆ  

“ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು.


“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


“ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


“ಸಾಮಾನ್ಯ ಜನರು ವಿಶೇಷ ಹಬ್ಬದ ದಿವಸಗಳಲ್ಲಿ ಯೆಹೋವನನ್ನು ಸಂಧಿಸಲು ಬರುವಾಗ ಉತ್ತರ ದ್ವಾರದಿಂದ ಬರುವವರು ದಕ್ಷಿಣ ದ್ವಾರದ ಮೂಲಕ ಹೊರಗೆ ಹೋಗಬೇಕು. ದಕ್ಷಿಣದ ದ್ವಾರದಿಂದ ಒಳ ಪ್ರವೇಶಿಸುವವನು ಉತ್ತರ ದ್ವಾರದ ಮೂಲಕ ಹೊರಗೆ ಹೋಗಬೇಕು. ಯಾರೂ ಬಂದ ದಾರಿಯಿಂದ ಹಿಂದೆ ಹೋಗಬಾರದು. ಪ್ರತಿಯೊಬ್ಬನೂ ನೇರವಾಗಿ ಮುಂದಕ್ಕೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು