Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:6 - ಪರಿಶುದ್ದ ಬೈಬಲ್‌

6 ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:6
47 ತಿಳಿವುಗಳ ಹೋಲಿಕೆ  

ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.


ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.


ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ.


ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.


ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ದೇವರ ಆಜ್ಞೆಗಳು ಶಾಶ್ವತವಾಗಿವೆ. ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ.


ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.


ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.


ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.


ಯೆಹೋವನ ಹೆಸರಿನಲ್ಲಿ ಮಾತಾಡುವಂತೆ ಮಾಡಿದ ದೇವರಿಗೆ ಸ್ತೋತ್ರ!


ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.


ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು