Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:7 - ಪರಿಶುದ್ದ ಬೈಬಲ್‌

7 ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:7
57 ತಿಳಿವುಗಳ ಹೋಲಿಕೆ  

ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.


“ನೀವು ಮೋಸದ ಕಾರ್ಯಕ್ಕೆ ದೂರವಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಕೂಡದು. ಅಂಥ ದುಷ್ಟಕಾರ್ಯ ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸೇ ವಿಧಿಸುವೆನು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.


ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”


ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.


ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರು ಬರೆಯಲ್ಪಟ್ಟಿಲ್ಲವೋ ಆ ವ್ಯಕ್ತಿಯನ್ನು ಬೆಂಕಿಯ ಕೆರೆಗೆ ಎಸೆಯಲಾಯಿತು.


ಬಳಿಕ ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಅವರಲ್ಲಿ ಹಣವಿರಲಿಲ್ಲ. ಆದ್ದರಿಂದ ಅವರು ಸಾಲ ತೀರಿಸಲು ಆಗಲಿಲ್ಲ. ಸಾಹುಕಾರನು ಅವರಿಗೆ, ‘ನೀವು ಸಾಲ ತೀರಿಸಬೇಕಾಗಿಲ್ಲ’ ಎಂದು ಹೇಳಿದನು. ಆ ಇಬ್ಬರಲ್ಲಿ ಯಾರು ಹೆಚ್ಚಾಗಿ ಸಾಹುಕಾರನನ್ನು ಪ್ರೀತಿಸುವರು?” ಎಂದು ಕೇಳಿದನು.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.


ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. ನಾನು ಅವರನ್ನು ಕ್ಷಮಿಸಬೇಕೋ?


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸು.


ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.


ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.


ಯೆಹೋವನೇ, ನಾನು ಮತ್ತು ಇಸ್ರೇಲಿನ ಜನರೆಲ್ಲರೂ ಈ ಸ್ಥಳದ ಕಡೆಗೆ ತಿರುಗಿ, ನಿನ್ನಲ್ಲಿ ಪ್ರಾರ್ಥಿಸುತ್ತೇವೆ. ದಯವಿಟ್ಟು ಆ ಪ್ರಾರ್ಥನೆಗಳನ್ನು ಲಾಲಿಸು. ನೀನು ಪರಲೋಕದಲ್ಲಿ ವಾಸಿಸುತ್ತಿರುವಿಯೆಂದು ನಮಗೆ ಗೊತ್ತಿದೆ. ನೀನು ನಮ್ಮ ಪ್ರಾರ್ಥನೆಗಳನ್ನು ಅಲ್ಲಿಯೇ ಕೇಳಿ, ನಮಗೆ ಕ್ಷಮೆಯನ್ನು ಅನುಗ್ರಹಿಸು.


ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”


ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ, ಆ ವ್ಯಕ್ತಿಗೆ ತೀರ್ಪುನೀಡು. ಆ ವ್ಯಕ್ತಿಯು ತಪ್ಪಿತಸ್ಥನಾಗಿದ್ದರೆ, ಅವನು ತಪ್ಪಿತಸ್ಥನೆಂಬುದನ್ನು ನಮಗೆ ತೋರಿಸು. ಅವನು ನಿರಪರಾಧಿಯಾಗಿದ್ದರೆ ಅವನು ತಪ್ಪಿತಸ್ಥನಲ್ಲವೆಂಬುದನ್ನೂ ದಯವಿಟ್ಟು ನಮಗೆ ತೋರಿಸು.


ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.


ನಮ್ಮ ದೇವರಾದ ಯೆಹೋವನೇ, ನೀನು ಅವರ ಪ್ರಾರ್ಥನೆಗಳಿಗೆ ಉತ್ತರಿಸಿದೆ. ನೀನು ಕ್ಷಮಿಸುವ ದೇವರೆಂದೂ ದುಷ್ಕೃತ್ಯಗಳಿಗೆ ದಂಡಿಸುವವನೆಂದೂ ಅವರಿಗೆ ತೋರ್ಪಡಿಸಿದೆ.


ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು