Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:29 - ಪರಿಶುದ್ದ ಬೈಬಲ್‌

29 ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:29
25 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.


ಮೋಶೆಯು ಇಸ್ರೇಲರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದುವೇ.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.


ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.


ಅಲ್ಲದೆ ದೇವಾಲಯಕ್ಕೆ ಬೇಕಾದ ಬೆಳ್ಳಿಬಂಗಾರಗಳ ಸಾಮಾನುಗಳನ್ನು ನಾನು ಕಾಣಿಕೆಯಾಗಿ ಕೊಟ್ಟಿರುತ್ತೇನೆ. ಯಾಕೆಂದರೆ ನನ್ನ ದೇವರ ಪರಿಶುದ್ಧಾಲಯವು ಕಟ್ಟಲ್ಪಡಬೇಕೆಂಬುದು ನಿಜವಾಗಿಯೂ ನನ್ನ ಬಯಕೆಯಾಗಿದೆ. ಈ ಪವಿತ್ರ ದೇವಾಲಯವನ್ನು ಕಟ್ಟಲು ನಾನು ಈ ವಸ್ತುಗಳನ್ನೆಲ್ಲಾ ಕೊಡುತ್ತಿದ್ದೇನೆ.


“ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.


“ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆಗಳನ್ನೂ ವಿಧಿನಿಯಮಗಳನ್ನೂ ತಪ್ಪದೆ ಪರಿಪಾಲಿಸಬೇಕು.


ನಾನು ಕೊಡುವ ಆಜ್ಞೆಗಳಿಗೆ ನೀವು ಏನನ್ನೂ ಸೇರಿಸಬಾರದು; ಏನನ್ನೂ ತೆಗೆಯಬಾರದು. ನಾನು ನಿಮಗೆ ತಿಳಿಸುವ ದೇವರ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು.


ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.


ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.


ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.


ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು